newsics.com
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಪುನಾರಚನೆ ಕುರಿತಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಸುಳಿವು ನೀಡಿದ್ದಾರೆ.
ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ನಾವು ಕೆಲ ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ. ಎರಡು ವರ್ಷದೊಳಗೆ ಅಧಿಕಾರ ತ್ಯಾಗ ಮಾಡಬೇಕು ಎಂದು ಹೇಳಿದ್ದೇವೆ ಎನ್ನುವ ಮೂಲಕ ಡಿಸಿಎಂ ಡಿಕೆಶಿ ಸಂಪುಟ ಪುನಾರಚನೆ ಇಂಗಿತ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಬಗ್ಗೆ ಮಾತನಾಡದಿರಿ- ಡಿಕೆ ಸೂಚನೆ:
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ. ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಶಾಸಕ ಗವಿಯಪ್ಪ ಅವರ ವಿರುದ್ಧ ಗರಂ ಆದ ಡಿಕೆಶಿ, ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ, ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ. ಯಾವುದೇ ಗ್ಯಾರಂಟಿಯನ್ನೂ ನಿಲ್ಲಿಸುವುದಿಲ್ಲ ಎಂದರು.
ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್ ಕಾರ್ಡ್ಗೆ ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ಮರು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.
RBI Governor ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Karwar News| 128 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಕಳ್ಳನ ಬಂಧನ