Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕರ್ನಾಟಕಪ್ರಮುಖ

Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Share
2 Min Read
SHARE

newsics.com

ಮೈಸೂರು: ಮುಡಾ ಸೈಟು ಹಂಚಿಕೆ ಅಕ್ರಮದ ಆರೋಪ, ಟೀಕೆಗಳ ಹೊರತಾಗಿಯೂ ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಮೇಲೆ ಭಕ್ತಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ.

ಮೈಸೂರು ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ಸಮರ್ಪಿಸಲು ಒಲವು ತೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಶೀಘ್ರವೇ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಾರಿಯ ಮೈಸೂರು ದಸರಾ ಹಬ್ಬವನ್ನೂ ಅದ್ದೂರಿಯಾಗಿ ಆಚರಿಸಲು ಅನುವು ಮಾಡಿಕೊಟ್ಟಿದ್ದ ಸರ್ಕಾರ, ಈಗ ಚಾಮುಂಡೇಶ್ವರಿಗೆ ಚಿನ್ನದ ರಥ ಸಮರ್ಪಿಸಲು ಮುಂದಾಗಿರುವುದು ಗಮನಸೆಳೆದಿದೆ.

ನಾಡ ದೇವತೆ ಮೈಸೂರು ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಿಸಿ ಸಮರ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ನವೆಂಬರ್ 19ರಂದು ಭಕ್ತರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು.

ಕನ್ನಡ ನಾಡಿನ ಅಸ್ಮಿತೆ, ನಾಡದೇವತೆ ಚಾಮುಂಡೇಶ್ವರಿ ದೇವಿ. ಮೈಸೂರು ಚಾಮುಂಡಿ ಬೆಟ್ಟ, ದೇವಸ್ಥಾನ, ದೇವಿಗೆ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ ಇದೆ. ಹೀಗಾಗಿ ನಾಡ ದೇವಿಯನ್ನು ಪೂಜಿಸುವಾಗ ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತರ ಬೇಡಿಕೆ.

ಚಿನ್ನದ ರಥಕ್ಕೆ ಅಗತ್ಯ ಪ್ರಸ್ತಾವನೆಯನ್ನು ಸರ್ಕಾರವೇ ತಯಾರಿಸಬೇಕು. ಈ ಉದ್ದೇಶಕ್ಕಾಗಿ ದೇವಸ್ಥಾನದಲ್ಲಿ ಪ್ರತ್ಯೇಕ ಹುಂಡಿ ಇಡಬೇಕು. ಸಂಗ್ರಹವಾದ ಹಣಕ್ಕಿಂತ ಹೆಚ್ಚು ಹಣ ಬೇಕಾದಲ್ಲಿ ಅದನ್ನು ಸರ್ಕಾರವೇ ಭರಿಸಬೇಕು ಎಂದು ಮನವಿ ಮಾಡಿದಾಗ ತಿಳಿಸಿದ್ದಾಗಿ ದಿನೇಶ್ ಗೂಳಿಗೌಡ ತಿಳಿಸಿದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಸ್ಪಂದಿಸಿದ್ದು, ಪರಿಶೀಲಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವುದು ಎಂದು ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. 100 ಕೋಟಿ ರೂಪಾಯಿ ವೆಚ್ಚದ ಚಿನ್ನದ ರಥ ನಿರ್ಮಾಣಕ್ಕೆ ಸೂಚನೆ ನೀಡಿರುವುದಾಗಿ ಮೂಲಗಳು ಹೇಳಿವೆ. ಮುಡಾ ಸೈಟು ಹಂಚಿಕೆ ಹಗರಣ ಮತ್ತು ಇತರೆ ಆರೋಪ, ಟೀಕೆಗಳ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹಲವು ಸಲ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ಪೂಜೆ ಸಲ್ಲಿಸಿಬಂದಿದ್ದರು

ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಇತಿಹಾಸ ಪ್ರಕಾರ, ಮೈಸೂರಿನ ಮುಮ್ಮಡಿ ಕೃಷ್ಣ ರಾಜ ಒಡೆಯರು 1827ರಲ್ಲಿ ಮರದ “ಸಿಂಹ ವಾಹನ” ರಥವನ್ನು ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದ್ದರು. ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನೂ ಒಡೆಯರೇ ಸಮರ್ಪಿಸಿದ್ದರು. ಅದೇ ರಥದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇಟ್ಟು ರಥೋತ್ಸವ ನಡೆಸಲಾಗುತ್ತಿತ್ತು. 1928 ರಿಂದ ರಥೋತ್ಸವ ನಡೆಯುತ್ತ ಬಂದಿದೆ ಎಂಬುದಕ್ಕೆ ಉಲ್ಲೇಖವಿದೆ.

ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸದ್ಯ ಮರದ ರಥ ಇದ್ದು, ಅದನ್ನು 1982ರಲ್ಲಿ ಕೊಯಮತ್ತೂರಿನ ಭಕ್ತರು ಮಾಡಿಸಿಕೊಟ್ಟಿದ್ದರು. ಈ ರಥ ಶಿಥಿಲವಾಗುತ್ತಿದೆ ಎಂಬ ಮಾತು ಕೇಳಿಬಂದಿದೆ. ಹೀಗಾಗಿ ಹೊಸ ರಥ ನಿರ್ಮಿಸುವುದಾದರೆ ಚಿನ್ನದ ರಥವೇ ಆಗಲಿ ಎಂಬ ಆಗ್ರಹ ಭಕ್ತರ ವಲಯದಲ್ಲಿ ಕೇಳಿಬರುತ್ತಿದೆ.

TAGGED:Golden Chariot for Goddess Chamundeshwari: CM instructs officials to submit proposal soon
Share This Article
Facebook Twitter Copy Link Print
Previous Article Plane Crash ವಿಮಾನ ಪತನ: ಆರು ಪ್ರಯಾಣಿಕರ ಸಾವು
Next Article Cabinet Reshuffle ಸಚಿವ ಸಂಪುಟ ಪುನಾರಚನೆ: ಡಿಸಿಎಂ ಡಿಕೆ ಪರೋಕ್ಷ ಸುಳಿವು, ಶಾಸಕ ಗವಿಯಪ್ಪ ವಿರುದ್ಧ ಗರಂ ಆದದ್ದೇಕೆ?

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?