newsics.com
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.
ಬಂಧನಕ್ಕೊಳಗಾಗಿರುವ ಹಿಂದೂ ಅರ್ಚಕ, ಇಸ್ಕಾನ್ನ ಚಿನ್ಮೋಯ್ ಕೃಷ್ಣದಾಸ್ ಅವರ ಪರ ವಕೀಲನನ್ನು ಹತ್ಯೆ ಮಾಡಲಾಗಿದೆ.
ಬಾಂಗ್ಲಾದೇಶದ ನ್ಯಾಯಾಲಯದ ಹೊರಗೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ಪರ ವಕೀಲರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನ ವಿರೋಧಿಸಿ ಬಾಂಗ್ಲಾದೇಶದ ಚಟ್ಟೋಗ್ರಾಮ್ ನ್ಯಾಯಾಲಯದ ಹೊರಗೆ ಬೃಹತ್ ಜನಸಮೂಹ ಸೇರಿತ್ತು. ಈ ವೇಳೆ ಪೊಲೀಸರು ದಬ್ಬಾಳಿಕೆ ಆರಂಭಿಸಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ.
ಬಾಂಗ್ಲಾದೇಶದ ಸನಾತನ ಜಾಗರೋನ್ ಜೋಟ್ನ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ ಬೆಂಬಲಿಗರು ಜೈಲಿಗೆ ಸಾಗಿಸುತ್ತಿದ್ದ ವ್ಯಾನ್ ಅನ್ನು ತಡೆದಾಗ ಅವರ ಪರ ವಕೀಲ ಸೈಫುಲ್ ಇಸ್ಲಾಂ ಅಲಿಫ್ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಪೊಲೀಸರು ಜನರನ್ನು ಚದುರಿಸಲು ಮುಂದಾದಾಗ ಈ ಘಟನೆ ನಡೆದಿದ್ದು, ಕನಿಷ್ಠ 7-8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
https://x.com/MehediMarof/status/1861375007026487533?t=ibtSiT_cKQ3mLcdxc3BDJw&s=19
Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ
Health Tips ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ದೂರವಿರಿ… ಇಲ್ಲದಿದ್ದರೆ ಈ ರೋಗವೂ ನಿಮ್ಮ ಜತೆಯಾದೀತು…