newsics.com
ಚಿಕ್ಕಮಗಳೂರು: ತನ್ನ ಮೈಮೇಲಿನ ಕಜ್ಜಿ ಗುಣಪಡಿಸಿಕೊಳ್ಳಲು ಅಜ್ಜಿ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮೊದಲೇ ಅಜ್ಜನನ್ನು, ಅತ್ಯಾಚಾರ ವೇಳೆ ಅಜ್ಜಿಯನ್ನೂ ಮೊಮ್ಮಗನೇ ಕೊಂದಿದ್ದಾನೆಂಬ ವಿಚಾರ ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ನಡೆದಿದ್ದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್ ನೀಡಿದೆ.
ತನಗಿರುವ ಕಜ್ಜಿ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಅತ್ಯಾಚಾರಕ್ಕೆ ಯತ್ನಿಸುವ ಮೊದಲೇ ಮೊಮ್ಮಗ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.
ಕರಿಬಸವಯ್ಯ ಅವರ ಪತ್ನಿ ಲಲಿತಮ್ಮ ಎಂಬುವರ ಕೊಲೆ ನ.21 ರಂದು ಆಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ.
ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅವನಿಗೆ ಮಹಿಳೆಯರ ಬಳಿ ಹೋಗುವ ಅಭ್ಯಾಸ ಇತ್ತಂತೆ. ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಆತನ ಸ್ನೇಹಿತರು, ನೀನು ಮಹಿಳೆಯರ ಬಳಿ ಹೋದಾಗ ಕಾಂಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ ಎಂದು ಹೇಳಿದ್ದರಂತೆ. ಅದಕ್ಕೆ ಬೆಂಗಳೂರಿನಲ್ಲಿ ಯಾರೂ ಒಪ್ಪದ ಕಾರಣ ಅಜ್ಜ-ಅಜ್ಜಿಯ ಮನೆಗೆ ಬಂದಿದ್ದ. ಅಜ್ಜಿಯ ಮೇಲೆ ಅತ್ಯಾಚಾರ ಮಾಡುವುದು ಆತನ ಮೂಲ ಉದ್ದೇಶವಾಗಿತ್ತು.
ಮೊದಲಿಗೆ ಅಜ್ಜನನ್ನು ಕಲ್ಲಿನಿಂದ ಚಚ್ಚಿ, ಕೊಲೆ ಮಾಡಿ ನಂತರ ಅಜ್ಜಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಜ್ಜಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದಿದ್ದರಿಂದ ಅಜ್ಜಿ ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ
Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ
Health Tips ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ದೂರವಿರಿ… ಇಲ್ಲದಿದ್ದರೆ ಈ ರೋಗವೂ ನಿಮ್ಮ ಜತೆಯಾದೀತು…