newsics.com
ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಚಂಡಮಾರುತ ಪರಿಣಾಮ ಬೆಂಗಳೂರಿನ ಮೇಲೂ ಹೆಚ್ಚು ಗೋಚರಿಸಲಿದ್ದು, ಗುಡುಗು ಸಮೇತ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.
ಕೆಲವೇ ಗಂಟೆಗಳಲ್ಲಿ ಕರ್ನಾಟಕಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿ 9 ಗಂಟೆ ಮೇಲೆ ಭಾರೀ ಮಳೆ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆಯಾಗಲಿದೆ.
ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.