newsics.com
ಬೆಳ್ತಂಗಡಿ : ಈಜಾಡಲು ಹೋಗಿ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಎಂಬಲ್ಲಿ ನಡೆದಿದೆ.
ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ಸಾವನ್ನಪ್ಪಿದ ದುರ್ದೈವಿಗಳು.
ವಾಲ್ಟರ್ರವರ ಮನೆಯಲ್ಲಿ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ.