newsics.comಬೆಂಗಳೂರು : ‘ಆರಾಮ್ ಅರವಿಂದ ಸ್ವಾಮಿ’ ಡೈರೆಕ್ಟರ್ ಅಭಿಷೇಕ್ ಶೆಟ್ಟಿ ಅವರು ಸಾಕ್ಷಾ ಶೆಟ್ಟಿ ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಂಡು, ನಮ್ಮನ್ನು ಹಾರೈಸಿ ಎಂದು ಫ್ಯಾನ್ಸ್ಗೆ ಮನವಿ ಮಾಡಿದ್ದಾರೆ.ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಾಕ್ಷಾ ಜೊತೆ ಅಭಿಷೇಕ್ ಜೊತೆ ಕುಂದಾಪುರದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ನಟನಿಗೆ ಅಭಿಮಾನಿಗಳು ಇದೀಗ ಶುಭಹಾರೈಸುತ್ತಿದ್ದಾರೆ.ನಮ್ ಗಣಿ ಬಿಕಾಂ ಪಾಸ್, ಗಜಾನನ & ಗ್ಯಾಂಗ್ ಚಿತ್ರದಲ್ಲಿ ನಟನೆಯ ಜೊತೆ ನಿರ್ದೇಶಕನಾಗಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರಕ್ಕೆ ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ.