newsics.com
ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೆನ್ನೈ, ಪುದುಚೇರಿ ಅಕ್ಷರಶಃ ತತ್ತರಿಸಿವೆ.
ತಮಿಳುನಾಡಿನ ಉತ್ತರ ಜಿಲ್ಲೆಗಳು ಮತ್ತು ಪುದುಚೇರಿಯ ಡೆಲ್ಟಾ ಜಿಲ್ಲೆಗಳಲ್ಲಿ ಚಂಡಮಾರುತ ಫೆಂಗಲ್ನಿಂದ ಉಂಟಾದ ತೀವ್ರ ಹವಾಮಾನ ಬದಲಾವಣೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಭಾನುವಾರ ಬೆಳಗಿನ ಸಮಯ 4 ಗಂಟೆಯವರೆಗೆ ಮುಚ್ಚಲಾಗಿತ್ತು.
ಶನಿವಾರದಂದು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರವಾದ ಹವಾಮಾನ ಪರಿಸ್ಥಿತಿ ಹಲವು ಆತಂಕದ ಕ್ಷಣಗಳಿಗೆ ಕಾರಣವಾಯಿತು. ಭಾರೀ ಮಂಜು ಮತ್ತು ಬಿರುಗಾಳಿಯಿಂದ ವಿಮಾನಗಳು ನಿಲ್ದಾಣದಲ್ಲಿ ಇಳಿಯಲು ಹೆಣಗಾಡಿದವು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಪ್ರತಿಕೂಲ ಪರಿಸ್ಥಿತಿಯಿದ್ದರೂ ವಿಮಾನ ಲ್ಯಾಂಡಿಂಗ್ ಮಾಡುವ ಹರಸಾಹಸವೇಕೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೆ, ವಿಮಾನ ಲ್ಯಾಂಡಿಂಗ್ನ ಭಯಾನಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಹವಾಮಾನ ವೈಪರೀತ್ಯದಿಂದ ವಿಮಾನ ಇಳಿಸಲು ಸವಾಲುಗಳನ್ನು ಎದುರಿಸಿದ ಚಾಲಕ ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಮಾಡದೇ ತನ್ನ ನಿರ್ಧಾರ ಬದಲಿಸುವಂತಾಯಿತು. ಈ ಮಧ್ಯೆ, ಮತ್ತೊಂದು ವಿಮಾನವು ಕ್ರಾಸ್ವಿಂಡ್ಗಳನ್ನು ಎದುರಿಸಲು ಮತ್ತು ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಯಿತು. ಇದು ವಿಮಾನದಲ್ಲಿದ್ದವರಿಗೆ ಕೈಯಲ್ಲಿ ಜೀವ ಹಿಡಿದುಕೊಳ್ಳುವಂತಹ ಭಯಾನಕ ಅನುಭವ ನೀಡಿತು.
ಪುದುಚೇರಿ ಮತ್ತು ತಮಿಳುನಾಡು ಕರಾವಳಿಯಲ್ಲಿ ಭೂಕುಸಿತವನ್ನು ಉಂಟುಮಾಡಿದ ಫೆಂಗಲ್ ಚಂಡಮಾರುತವು ಕಳೆದ ಆರು ಗಂಟೆಗಳ ಬಳಿಕ ಪುದುಚೇರಿ ಸ್ಥಿರವಾಗಿದೆ. ಕಡಲೂರ್ನಿಂದ ಉತ್ತರಕ್ಕೆ ಸುಮಾರು 30 ಕಿಲೋಮೀಟರ್ ಮತ್ತು ವಿಲ್ಲುಪುರಂನಿಂದ ಪೂರ್ವಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.
https://twitter.com/i/status/1863080179314418153
Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ
Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?