newsics.com
ಮಡಿಕೇರಿ: ಆಂಧ್ರಪ್ರದೇಶ ಸರ್ಕಾರದ ಮನವಿ ಮೇರೆಗೆ ಅಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿಗೆ 1 ತಿಂಗಳು ತರಬೇತಿ ನೀಡುವ ಕಾರ್ಯಾಗಾರಕ್ಕೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಚಾಲನೆ ಸಿಕ್ಕಿದೆ.
ಆಂಧ್ರದ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರ ಮನವಿ ಮೇರೆಗೆ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ.
ಕಾಡಾನೆ ಸೇರಿದಂತೆ ವನ್ಯಜೀವಿಗಳ ಸಮಸ್ಯೆ ಕರ್ನಾಟಕ ಮಲೆನಾಡು ಭಾಗದಲ್ಲಿ ಮಾತ್ರವಲ್ಲ, ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲೂ ಹೆಚ್ಚಾಗಿದೆ.
ಕಾಡಾನೆಗಳ ಹಾವಳಿಯಂತೂ ಮಿತಿಮೀರಿದೆ. ನಾಡಿಗೆ ನುಗ್ಗುವ ಆನೆಗಳನ್ನು ಮತ್ತೆ ಕಾಡಿಗಟ್ಟಲು ನುರಿತ ಮಾವುತರು ಹಾಗೂ ಕಾವಾಡಿಗಳು ಇಲ್ಲದೇ ಇರೋದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ವನ್ಯಜೀವಿ ನಿರ್ವಹಣೆ ಕುರಿತು ರಾಜ್ಯದ ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಬೇಕೆಂದು ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪವನ್ ಕಲ್ಯಾಣ್ ಮನವಿ ಮಾಡಿದ್ದರು. ಇದೀಗ ಎರಡು ರಾಜ್ಯಗಳ ಅರಣ್ಯ ಇಲಾಖೆಗಳ ಪರಸ್ಪರ ಸಹಕಾರದೊಂದಿಗೆ ತರಬೇತಿ ನೀಡಲಾಗುತ್ತಿದೆ.

ಆಂಧ್ರಪ್ರದೇಶದ 17 ಮಾವುತ ಮತ್ತು ಕಾವಾಡಿಗರು, ನಾಲ್ವರು ಇಲಾಖೆ ಸಿಬ್ಬಂದಿ ಸೇರಿ 21 ಮಂದಿಗೆ ನಮ್ಮ ರಾಜ್ಯದ ಮಾವುತರು ಮತ್ತು ಕವಾಡಿಗಳು ತರಬೇತಿ ನೀಡುತ್ತಿದ್ದಾರೆ.
ಸಾಕಾನೆಗಳಿಗೆ ಸ್ನಾನ ಮಾಡಿಸುವುದು, ಆಹಾರ ಕೊಡುವುದು, ಇಂತಹದ್ದೇ ಪದಗಳನ್ನು ಬಳಸಿ ಆನೆಗಳನ್ನು ಮಾತನಾಡಿಸುವುದು, ವನ್ಯಜೀವಿ ಸಂಘರ್ಷ ತಡೆಯುವುದು ಸೇರಿ ಇನ್ನಿತರ ವನ್ಯಜೀವಿ ನಿರ್ವಹಣೆ ಕುರಿತು ಹೇಳಿಕೊಡುತ್ತಿದ್ದಾರೆ.
Sandalwood actress | ಕಿರುತೆರೆ ಕಲಾವಿದೆ, ಚಿತ್ರನಟಿ ಶೋಭಿತಾ ಹೈದರಾಬಾದ್ನಲ್ಲಿ ಆತ್ಮ*ಹತ್ಯೆ
Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ
Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?