newsics.com
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಚುರುಕುಗೊಂಡಿದ್ದು, ಈಗ ವಿಧಾನಸೌಧವನ್ನೂ ತಲುಪಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಅವರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಇಡಿ ನೋಟಿಸ್ ಜಾರಿ ಮಾಡಿದ್ದು, ಮಂಗಳವಾರ (ಡಿಸೆಂಬರ್ 3) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇಡಿ ಅಧಿಕಾರಿಗಳು ಈಗ ಹಂತ ಹಂತವಾಗಿ ತನಿಖೆ ಮುಂದುವರಿಸಿದ್ದು, ಈಗಾಗಲೇ ಮುಡಾ ಹಾಲಿ ಮತ್ತು ಮಾಜಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ. ಇದೀಗ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳತ್ತ ಇಡಿ ಅಧಿಕಾರಿಗಳ ಚಿತ್ತ ನೆಟ್ಟಿದೆ.
ಈ ಮಧ್ಯೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ಎನ್ನುವ ಸುದ್ದಿ ಹರಿದಾಡಿದ್ದು, ಅದು ಸುಳ್ಳು ಎಂದು ಗೊತ್ತಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್, ನನಗೆ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Fengal Cyclone Effect ನಿರಂತರ ಮಳೆ ಅಬ್ಬರಕ್ಕೆ ರಾಜ್ಯದ ರೈತರು ಕಂಗಾಲು
Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್ಗಳು, ವಿಡಿಯೋ ವೈರಲ್
Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ