newsics.com
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಬಿಐ ಎಸ್ಪಿ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶಿಸಿದೆ.
ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ.
ಅಪರೂಪದ ಆದೇಶದಲ್ಲಿ, ಕರ್ನಾಟಕ ಹೈಕೋರ್ಟ್ ಬುಧವಾರ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ರಾಜ್ಯ ಪೊಲೀಸ್ ಇಲಾಖೆ ಎರಡರ ಅಧಿಕಾರಿಗಳನ್ನು ಒಳಗೊಂಡ ವಿಶಿಷ್ಟ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ.
ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ.
ಸೆಕ್ಷನ್ 108ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ನ.22ರಂದು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ಪ್ರಶ್ನಿಸಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಕನಕಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.
ಎಸ್ಐಟಿಯು ಬೆಂಗಳೂರಿನ ಸಿಬಿಐನ ಪೊಲೀಸ್ ಅಧೀಕ್ಷಕ (ಎಸ್ಪಿ) ವಿನಾಯಕ್ ವರ್ಮಾ ಅವರ ನೇತೃತ್ವದಲ್ಲಿರುತ್ತದೆ. ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡಿರುತ್ತದೆ – ಅಕ್ಷಯ್ ಎಂ. ಹಕೇ, ಡೆಪ್ಯುಟಿ ಕಮಾಂಡೆಂಟ್ ಜನರಲ್, ಗೃಹ ರಕ್ಷಕರು, ಬೆಂಗಳೂರು ಮತ್ತು ನಿಶಾ ಜೇಮ್ಸ್, ಎಸ್ಪಿ, ಆಂತರಿಕ. ಭದ್ರತಾ ವಿಭಾಗ, ಬೆಂಗಳೂರು ಈ ತಂಡದಲ್ಲಿದ್ದಾರೆ.
ಯಾವುದೇ ಸಮಯದ ನಷ್ಟವಿಲ್ಲದೆ ತಕ್ಷಣವೇ ತನಿಖೆಯನ್ನು ವಹಿಸಿಕೊಳ್ಳುವಂತೆ ಮತ್ತು ಮೂರು ತಿಂಗಳೊಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಲಯವು ಎಸ್ಐಟಿಗೆ ಸೂಚಿಸಿದೆ.
ಉದ್ಯಮಿ ಹಾಗೂ ವಕೀಲೆ ಜೀವಾ ಆತ್ಮಹತ್ಯೆ ಪ್ರಕಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು.
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು.
ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್ಪ್ರೆಸಸ್ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.
relationship: ಹೊಸದಾಗಿ ಮದುವೆಯಾದವರೇ? ಫಸ್ಟ್ ನೈಟ್ ಗೂ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ…