newsics.com
ಸಿಂಗಾಪುರ: ಆಭರಣ ಮಳಿಗೆಯೊಂದರಲ್ಲಿ ಪತ್ನಿಗಾಗಿ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ಸಿಂಗಾಪುರ ವ್ಯಕ್ತಿಯೊಬ್ಬರಿಗೆ ಲಕ್ಕಿ ಡ್ರಾನಲ್ಲಿ ಎಂಟು ಕೋಟಿಗೂ ಹೆಚ್ಚು ಹಣ ದೊರೆತಿದೆ.
ಸಿಂಗಾಪುರದಲ್ಲಿ ಖಾಸಗಿ ಕಂಪನಿಯಲ್ಲಿ ಪ್ರೊಜೆಕ್ಟ್ ಎಂಜಿನಿಯರ್ ಆಗಿರುವ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಎನ್ನುವ ವ್ಯಕ್ತಿಗೆ ಈ ಭಾರೀ ಮೊತ್ತದ ಬಹುಮಾನ ಲಭಿಸಿದೆ.
ಐಥಥಬಾಲಸುಬ್ರಹ್ಮಣ್ಯಂ ಅವರು ನವೆಂಬರ್ 24 ರಂದು ಸಿಂಗಪುರದ ಪ್ರಸಿದ್ದ ಮುಸ್ತಫಾ ಜ್ಯುವೆಲರಿಯಲ್ಲಿ ಪತ್ನಿಗಾಗಿ 84 ಸಾವಿರ ರೂ. ಮೌಲ್ಯದ ಚಿನ್ನದ ಸರ ಖರೀದಿಸಿದ್ದರು. ಇದೇ ವೇಳೆ ಅಂಗಡಿಯಲ್ಲಿ ಚಿನ್ನ ಖರೀದಿಸಿದವರಿಗೆ ಲಕ್ಕಿ ಡ್ರಾ ಬಹುಮಾನ ನಡೆಯುತ್ತಿತ್ತು.
ಅದೃಷ್ಟದಿಂದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಅವರು ಡ್ರಾದಲ್ಲಿ ಗೆದ್ದಿದ್ದಾರೆ. ಈ ವಿಚಾರವನ್ನು ಮುಸ್ತಫಾ ಜುವೇಲರಿ ಅವರು ಇನ್ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.
ನನ್ನ ತಂದೆಯ ಪುಣ್ಯಸ್ಮರಣೆಯಂದೇ ನನಗೆ ಈ ಬಹುಮಾನ ಬಂದಿದೆ. ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸುತ್ತೇನೆ ಎಂದು ತಮಿಳುನಾಡು ಮೂಲದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಹೇಳಿದ್ದಾರೆ.
MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ