newsics.com
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರು ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಹಿನ್ನೆಲೆಯಲ್ಲಿ ಪ್ರತಿವಾದಿಗಳಿಗೆ ಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಮತ್ತು ದೇವರಾಜು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ನಲ್ಲಿ ಗುರುವಾರ ಆರಂಭವಾಯಿತು
ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎನ್ವಿ ಅಂಜಾರಿಯಾ ಮತ್ತು ಕೆವಿ ಅರವಿಂದ್ ಅವರ ದ್ವಿಸದಸ್ಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ನೀಡಿ 2025ರ ಜನವರಿ 25ಕ್ಕೆ ವಿಚಾರಣೆಯನ್ನು ಮುಂದೂಡಿತು.
ಮುಖ್ಯಮಂತ್ರಿ ಮತ್ತಿತರರ ವಿರುದ್ಧ ದೂರು ದಾಖಲಿಸಿರುವ ಪ್ರತಿವಾದಿಗಳಾದ ರಾಜ್ಯಪಾಲರ ಕಚೇರಿ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿದರು. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಸೆಪ್ಟೆಂಬರ್ 24ರಂದು ಏಕಸದಸ್ಯ ಪೀಠ ಎತ್ತಿಹಿಡಿದಿತ್ತು.
ಪ್ರಕರಣದ ನಾಲ್ಕನೇ ಆರೋಪಿ ಭೂ ಮಾಲೀಕ ದೇವರಾಜು ಪರ ವಕೀಲ ದುಷ್ಯಂತ್ ದವೆ ವಾದ ಮಂಡಿಸಿ 80 ವರ್ಷದ ದೇವರಾಜು ಅವರ ವಿರುದ್ಧ ಯಾವುದೇ ಆರೋಪ ಇಲ್ಲ. ಆದರೂ, ನಮ್ಮ ಕಕ್ಷಿದಾರ ದೇವರಾಜ್ಗೆ ತೊಂದರೆ ಆಗುತ್ತಿದ್ದು, ಇವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂದರು. ದೇವರಾಜು ವಿರುದ್ಧ ರಾಜ್ಯಪಾಲರ ಆದೇಶದಲ್ಲಿ ಉಲ್ಲೇಖ ಇಲ್ಲ. 2004ರಲ್ಲಿ ಜಮೀನು ಮಾರಾಟ ಮಾಡಿದ್ದಾರೆ. 2024ರಲ್ಲಿ ಇಷ್ಟೆಲ್ಲ ಬೆಳವಣಿಗೆ ಆಗುತ್ತದೆ ಎಂದು ದೇವರಾಜ್ ಅವರಿಗೆ ತಿಳಿದಿರಲಿಲ್ಲ. ವಂಚನೆ ಆರೋಪದಡಿ ದೇವರಾಜ್ ವಿರುದ್ದ ತನಿಖೆಗೆ ಆದೇಶಿಸಲಾಗಿದೆ. 80ನೇ ಇಳಿ ವಯಸ್ಸಿನಲ್ಲಿ ದೇವರಾಜ್ ರಾಜಕೀಯ ದಾಳಿಗೆ ಸಿಲುಕಿದ್ದಾರೆ ಎಂದು ವಾದಿಸಿದರು.
Minister car accident ಹಾಸನ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವರ ಕಾರು ಡಿಕ್ಕಿ: ಮುನಿಯಪ್ಪ ಪಾರು
Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ
Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ
Relationship Tips ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ