newsics.com
ಲಕ್ನೋ : ಉತ್ತರ ಪ್ರದೇಶದ ಕನೌಜ್ ಪ್ರದೇಶದ ಬಳಿಯ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ ಮಧ್ಯಾಹ್ನ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಮತ್ತು ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 19ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮುಂದೆ ಹೋಗುತ್ತಿದ್ದ ಯುಪಿಡಿಎ ನೀರು ಸಿಂಪಡಿಸುವ ಟ್ಯಾಂಕರ್’ಗೆ ಡಿಕ್ಕಿ ಹೊಡೆದ ನಂತರ ಬಸ್ ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. ಲಕ್ನೋದಿಂದ ಪ್ರಯಾಣಿಕರನ್ನು ಹೊತ್ತ ಬಸ್ ದೆಹಲಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಬಸ್ ಚಾಲಕ ಚಾಲನೆ ಮಾಡುವಾಗ ನಿದ್ರೆಯಲ್ಲಿದ್ದನು, ಇದರಿಂದಾಗಿ ಡಿಕ್ಕಿ ಸಂಭವಿಸಿದೆ.
ಅಪಘಾತದ ನಂತರ, ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಜಲಶಕ್ತಿ ಸಚಿವ ಸ್ವತಂತ್ರದೇವ್ ಸಿಂಗ್ ಅವರು ತಮ್ಮ ಬೆಂಗಾವಲು ವಾಹನವನ್ನ ನಿಲ್ಲಿಸಿ ಗಾಯಗೊಂಡವರನ್ನ ಬಸ್ಸಿನಿಂದ ಹೊರತೆಗೆಯಲು ಸಹಾಯ ಮಾಡಿದರು. ಅವರು ಅಪಘಾತದ ಬಗ್ಗೆ ಯುಪಿಡಿಎ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. “ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರಿಗೆ ಸೂಚನೆ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ.