newsics.com
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಯುವಕ ಪೃಥ್ವಿರಾಜ್ ಥೈಲ್ಯಾಂಡ್ನ ಯುವತಿ ಮೊಂತಕನ್ ಸಸೂಕ್ ಅವರನ್ನು ಭಾರತೀಯ ಸಂಪ್ರದಾಯದಂತೆ ಗುರುವಾರ ಮದುವೆಯಾದರು.
ಈ ಜೋಡಿಯದ್ದು ದೇಶ-ಕಾಲ, ಜಾತಿ-ಮತ ಮೀರಿದ ಪ್ರೀತಿ. ಥೈಲ್ಯಾಂಡ್ನಲ್ಲಿ ಅರಳಿದ ಪ್ರೇಮಕಥೆ ಮಂಗಳೂರಿನಲ್ಲಿ ಸಪ್ತಪದಿ ತುಳಿಯುವ ಮೂಲಕ ಒಂದಾಗಿದೆ.
ಮಂಗಳೂರಿನ ಪೃಥ್ವಿರಾಜ್ ಎಸ್.ಅಮೀನ್ ಹಾಗೂ ಥೈಲ್ಯಾಂಡ್ನ ಮೊಂತಕನ್ ಸಸೂಕ್ ಜೋಡಿ ವಿವಾಹ ಮಾಡಿಕೊಂಡಿದ್ದಾರೆ. ವಕೀಲೆ ಸುಜಯಾ ಸತೀಶ್ ಹಾಗೂ ಸತೀಶ್ ಕುಮಾರ್ ಅವರ ಪುತ್ರ ಪೃಥ್ವಿರಾಜ್ ಅವರು ಬೆಂಗಳೂರಿನಲ್ಲಿ ತಮ್ಮದೇ ಸಾಫ್ಟ್ವೇರ್ ಕಂಪನಿ ಹೊಂದಿದ್ದಾರೆ. ಇವರ ಸಂಸ್ಥೆ ಟಾಟಾ, ಪೋರ್ಸ್ ಮುಂತಾದ ಕಂಪೆನಿಗಳಿಗೆ ಸಾಫ್ಟ್ವೇರ್ ಸರ್ವೀಸ್ ಒದಗಿಸುತ್ತದೆ.
ಪ್ರಾಜೆಕ್ಟ್ ಮೇಲೆ ಥೈಲ್ಯಾಂಡ್ ದೇಶಕ್ಕೆ ಹೋಗಿದ್ದಾಗ ಪೃಥ್ವಿರಾಜ್ಗೆ ಪ್ರೇಮಿಗಳ ದಿನದಂದೇ ಮೊಂತಕನ್ ಸಸೂಕ್ ಪರಿಚಯವಾಗಿದ್ದಾರೆ. ಅವರನ್ನು ನೋಡಿದ್ದೇ ಪೃಥ್ವಿರಾಜ್ಗೆ ಪ್ರೀತಿ ಚಿಗುರೊಡೆದಿದೆ. ಮೊಂತಕನ್ ಕೂಡ ಇವರ ಪ್ರೀತಿಯನ್ನು ಒಪ್ಪಿದ್ದಾರೆ. ಪ್ರೀತಿ ಗಟ್ಟಿಗೊಳ್ಳುತ್ತಿದ್ದಂತೆ ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ.
ಭಾರತೀಯ ಪದ್ಧತಿ ಪ್ರಕಾರ ಗುರುವಾರ ಶ್ರೀಮಂಗಳಾದೇವಿ ದೇವಸ್ಥಾನದಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ಮದುವೆ ನಡೆದಿದೆ. ಡಿ.7ರಂದು ಅಡ್ಯಾರ್ ಗಾರ್ಡನ್ನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದೆ. ಇನ್ನು ಮುಂದೆ ಮೊಂತಕಾನ್ ಥೈಲ್ಯಾಂಡ್ ತೊರೆದು ಭಾರತೀಯ ಸೊಸೆಯಾಗಲಿದ್ದಾರೆ.
Postpartum death ಬಳ್ಳಾರಿ ಬಿಮ್ಸ್ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ
Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ
KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,ಕೇರಳ ಲಾಬಿ ಶಂಕೆ