newsics.com
ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಈ ಪರಿಸ್ಥಿತಿಯಲ್ಲಿ ಭಾರತೀಯ ಪ್ರಜೆಗಳು ಸಿರಿಯಾ ನಗರಗಳಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.
ಸಿರಿಯಾ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯ, ರಷ್ಯಾ ಮತ್ತು ಇರಾನ್ ಬೆಂಬಲಿತ ಬಶರ್ ಅಲ್-ಅಸ್ಸಾದ್ ಆಡಳಿತವನ್ನು ಟರ್ಕಿಯಿಂದ ಬೆಂಬಲಿತವಾಗಿರುವ ಬಂಡುಕೋರ ಗುಂಪುಗಳು ಮತ್ತು ಮಿಲಿಷಿಯಾಗಳಿಂದ ಸುತ್ತುವರಿದಿದೆ. ಈ ಕಾರಣದಿಂದ ಸಿರಿಯಾದಲ್ಲಿ ಪರಿಸ್ಥಿತಿ ಹದಗೆಡಿದೆ. ಇದೀಗ ಸಿರಿಯಾದಲ್ಲಿರುವ ಭಾರತೀಯರನ್ನು ಎಚ್ಚರಿಕೆ ಹಾಗೂ ಜಾಗೃತೆಯಲ್ಲಿ ಇರುವಂತೆ ಭಾರತ ಹೇಳಿದೆ. ಸಿರಿಯಾ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರವು ಕಳವಳ ವ್ಯಕ್ತಪಡಿಸಿದೆ. ಇದೀಗ ಭಾರತ ಸರ್ಕಾರ ಎಲ್ಲಾ ಭಾರತೀಯ ಪ್ರಜೆಗಳಿಗೆ ಮುಂದಿನ ಸೂಚನೆ ಬರುವವರೆಗೆ ಪ್ರಯಾಣ ಮಾಡುವುದನ್ನು ತಪ್ಪಿಸುವಂತೆ ಹೇಳಿದೆ.
ಇನ್ನು ಈ ಬಗ್ಗೆ ಭಾರತ ಸರ್ಕಾರ ತುರ್ತು ಸಹಾಯವಾಣಿ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಹಂಚಿಕೊಂಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಸಿರಿಯಾದಲ್ಲಿರುವ ಎಲ್ಲಾ ಭಾರತೀಯರಿಗೆ ಡಮಾಸ್ಕಸ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಾಧಿಸುವಂತೆ ಹೇಳಿದೆ. ಇನ್ನು ಭಾರತ ಸರ್ಕಾರ ಸಿರಿಯಾದಲ್ಲಿರುವ ಭಾರತೀಯರನ್ನು ಕರೆತರಲು ಈಗಾಗಲೇ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಸರ್ಕಾರ ಸೂಚನೆ ಬರುವವರೆಗೆ ಯಾರು ಕೂಡ ಹೊರಗೆ ಬರಬೇಡಿ. ಸಾಧ್ಯವಿರುವವರು, ಲಭ್ಯವಿರುವ ಆರಂಭಿಕ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾವನ್ನು ತೊರೆಯುವಂತೆ ಸೂಚನೆ ನೀಡಿದೆ.