newsics.com
ಬೆಂಗಳೂರು: ನಗರದಲ್ಲಿ ಸೋಮವಾರ ಮತ್ತೊಂದು ಜೋಡಿ ಕೊಲೆ ನಡೆದಿದ್ದು, ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಜೋಡಿ ಕೊಲೆ ನಡೆದಿದೆ.
ವಿಕ್ರಂ (21) ಮತ್ತು ತೂರಿ (33) ಕೊಲೆಯಾದವರು. ಯಲಹಂಕ ಬಳಿಯ ಬಯಲು ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ಇವರಿಬ್ಬರು ಸೆಕ್ಯೂರಿಟಿ ಗಾರ್ಡ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನೇಪಾಳ ಮತ್ತು ಬಿಹಾರ ಮೂಲದ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಡರಾತ್ರಿ ಪಾರ್ಟಿ ಮಾಡುವ ವೇಳೆ ಗಲಾಟೆಯಾಗಿ ಕೊಲೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Server down ಐಆರ್ಸಿಟಿಸಿ ವೆಬ್ಸೈಟ್ ಸ್ಥಗಿತ: ಟಿಕೆಟ್ ಬುಕ್ ಮಾಡಲಾರದೆ ಪ್ರಯಾಣಿಕರ ಪರದಾಟ
Hindalaga jail ಅಧಿವೇಶನ ವೇಳೆ ಹಿಂಡಲಗಾ ಜೈಲಲ್ಲಿ ಕೈದಿಗಳ ಐಷಾರಾಮಿ ಜೀವನ ಬಟಾಬಯಲು, ವಿಡಿಯೋ ವೈರಲ್
Flight Hijack ಪ್ರಯಾಣಿಕರಿದ್ದ ವಿಮಾನ ಹೈಜಾಕ್ಗೆ ಯತ್ನ: ಶಂಕಿತನ ಬಂಧನ