newsics.com
ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋದ ಅಧಿಕಾರಿ, ಸಿಬ್ಬಂದಿಗಳಿಗೆ ಮಾತ್ರವೇ ರಜೆಯನ್ನು ಘೋಷಿಸಲಾಗಿದೆ. ಅದರ ಹೊರತಾಗಿ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂಬುದಾಗಿ ಬಿಎಂಆರ್ ಸಿಎಲ್ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL), ಮೆಟ್ರೋ ಕಾರ್ಯಾಚರಣೆಗಳು ಅತ್ಯಗತ್ಯ ಸೇವೆಯಾಗಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾಳೆ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಮೆಟ್ರೋ ಚಲಿಸುತ್ತದೆ ಎಂಬುದಾಗಿ ತಿಳಿಸಿದೆ.
ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ