newsics.com
ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಲಾಗಿದೆ.
ಕೃಷ್ಣ ನಿಧನ ಹಿನ್ನೆಲೆಯಲ್ಲಿ ನಾಳೆ (ಡಿ.11) ಸರ್ಕಾರಿ ರಜೆ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೂ ಈ ರಜೆ ಅನ್ವಯವಾಗಲಿದೆ. ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
SM Krishna SM ಕೃಷ್ಣ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ
Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ
S M Krishna and Dr. Rajkumar ಮೇರುನಟ ಡಾ.ರಾಜ್ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ
S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು, ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
Child Sold ಗಂಡನ ಕಷ್ಟ ನೋಡಿ ಮಗು ಮಾರಿದ ತಾಯಿ! ಒಂದೂವರೆ ಲಕ್ಷ ರೂ.ಗಳಿಗೆ ಮಾರಾಟ, ನಾಲ್ವರ ಬಂಧನ