newsics.com
ಭಟ್ಕಳ(ಉತ್ತರ ಕನ್ನಡ): ಪ್ರವಾಸಕ್ಕೆಂದು ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಶ್ರಾವಂತಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಮುಂದುವರಿದಿದೆ.
ಮುರುಡೇಶ್ವರ ಬೀಚ್ನಲ್ಲಿ ಮಂಗಳವಾರ ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದಂತೆ ದೀಕ್ಷಾ, ಲಾವಣ್ಯ, ವಂದನಾ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.
ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ
Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ
SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?