newsics.com
ಶ್ರೀನಗರ :ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನವಾಗಿರುವ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ.
ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಇನ್ನು ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಯ ಕುರಿತು ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗುತ್ತಿದೆ.