newsics.com
ಮಂಡ್ಯ: ತಮ್ಮ ಅನೈತಿಕ ಸಂಬಂಧ ಕುಟುಂಬದವರಿಗೆ ಗೊತ್ತಾದ ಹಿನ್ನೆಲೆಯಲ್ಲಿ ವಿವಾಹಿತರಿಬ್ಬರು ಭಯಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕೆ. ಬೆಳ್ಳೂರು ಗ್ರಾಮದ ಸೃಷ್ಟಿ (20) ನದಿಗೆ ಹಾರಿ ಸಾವನ್ನಪ್ಪಿದ್ದರೆ, ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆ. ಬೆಳ್ಳೂರು ಗ್ರಾಮದ ಸೃಷ್ಟಿಯನ್ನು ಆತಗೂರು ಹೋಬಳಿ ಯರಗನಹಳ್ಳಿ ಗ್ರಾಮದ ದಿನೇಶ್ ಎಂಬುವರಿಗೆ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ನಂತರ ದಂಪತಿಗಳ ನಡುವೆ ಹೊಂದಾಣಿಕೆ ಇಲ್ಲದ ಕಾರಣ ನಾಲ್ಕೈದು ಬಾರಿ ಜಗಳ ನಡೆದ ಹಿನ್ನೆಲೆಯಲ್ಲಿ ಸೃಷ್ಟಿ ದಿನೇಶನನ್ನು ತೊರೆದಿದ್ದಳು. ಆದರೆ ಬನ್ನಹಳ್ಳಿಯ ಪ್ರಸನ್ನ ಎಂಬುವರೊಂದಿಗೆ ಸೃಷ್ಟಿ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.
ಈ ವಿಚಾರ ಎರಡೂ ಕುಟುಂಬಗಳಿಗೆ ಗೊತ್ತಾದ ಹಿನ್ನೆಲೆಯಲ್ಲಿ ಸೃಷ್ಟಿ ನಾಪತ್ತೆಯಾಗಿದ್ದಳು. ಪತ್ನಿ ನಾಪತ್ತೆಯಾದ ಬಗ್ಗೆ ಗಂಡ ದಿನೇಶ್ ಕೆಸ್ತೂರು ಪೊಲೀಸರಿಗೆ ದೂರು ನೀಡಿದ್ದರು. ತನ್ನ ಹಾಗೂ ಪ್ರಸನ್ನ ನಡುವಿನ ಅನೈತಿಕ ಸಂಬಂಧ ಎರಡು ಕುಟುಂಬಗಳಿಗೆ ಗೊತ್ತಾದ ಕಾರಣ ಭೀತಿಗೊಂಡ ಸೃಷ್ಟಿ ಶಿಂಷಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಯ ಶವ ಮದ್ದೂರು ತಾಲೂಕು ವೈದ್ಯನಾಥಪುರ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.
ಸೃಷ್ಟಿ ಸಾವನ್ನಪ್ಪಿದ ವಿಚಾರ ತಿಳಿಯುತ್ತಲೇ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಸನ್ನ ಸಹ ಬನ್ನಹಳ್ಳಿ ಗ್ರಾಮದ ತನ್ನ ಮನೆಯಲ್ಲಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ.
ಘಟನೆ ಸಂಬಂಧ ಮದ್ದೂರು ಪೊಲೀಸರು ಮೃತರ ಎರಡೂ ಕುಟುಂಬಗಳು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲ ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಸೃಷ್ಟಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಸನ್ನ ಶವ ಪರೀಕ್ಷೆ ನಂತರ ಇಬ್ಬರ ಶವಗಳನ್ನು ವಾರಸುದಾರರ ವಶಕ್ಕೆ ಒಪ್ಪಿಸಲಾಯಿತು.
Viral video ನಗ್ನವಾಗಿ ರೈಲಿನ ಮಹಿಳಾ ಬೋಗಿಗೆ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಪ್ರಯಾಣಿಕರು
Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ
Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್