newsics.com
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್ಗೆ ಹಾಜರುಪಡಿಸಿದರು.
newsics.com
ವಿಚಾರಣೆ ವೇಳೆ ಎಲ್ಲಿ ಅರೆಸ್ಟ್? ಎಷ್ಟು ಗಂಟೆಗೆ ಅರೆಸ್ಟ್? ಎಲ್ಲೆಲ್ಲಿಗೆ ಕರ್ಕೊಂಡು ಹೋಗಿದ್ದರು? ಏನು ಮಾಡಿದ್ರು, ತೊಂದರೆ ಕೊಟ್ರಾ ? ಎಂದೆಲ್ಲಾ ನ್ಯಾಯಾಧೀಶರು ಪ್ರಶ್ನಿಸಿದರು. ಕಟಕಟೆಯಲ್ಲಿ ನಿಂತು ಉತ್ತರಿಸಿದ ಸಿ.ಟಿ ರವಿ, ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿದ್ರು, ಗದಗ, ಧಾರವಾಡ, ಸವದತ್ತಿ, ರಾಮದುರ್ಗ ಸುತ್ತಾಡಿಸಿದ್ರು. ನನಗೆ ಮಾನಸಿಕ, ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಮೊಬೈಲ್ ಜೊತೆಗೆ ವಾಚ್ ಕೂಡ ಕಿತ್ತುಕೊಂಡರು ಎಂದು ಸರಣಿ ಆರೋಪ ಮಾಡಿದ್ರು.
ಪ್ರತಿ 10 ನಿಮಿಷಕ್ಕೆ ಪೊಲೀಸರಿಗೆ ಯಾರೋ ಫೋನ್ ಮಾಡ್ತಿದ್ರು. ಯಾವ ಕಾರಣಕ್ಕೆ ಅರೆಸ್ಟ್ ಮಾಡಿದ್ದಾರೆ, ಅನ್ನೋ ಮಾಹಿತಿ ಕೂಡ ಕೊಡಲಿಲ್ಲ. ನನ್ನ ಕುಟುಂಬಕ್ಕೂ ಕೂಡ ಮಾಹಿತಿ ನೀಡಲಿಲ್ಲ ಎಂದು ಕಣ್ಣೀರಿಟ್ಟರು.
ಈ ವೇಳೆ ಮೊದಲು ನನ್ನ ಕಕ್ಷಿದಾರನಿಗೆ ಮೆಡಿಕಲ್ ಟ್ರೀಟ್ಮೆಂಟ್ ಬೇಕಾಗಿದೆ, ಹೀಗಾಗಿ ಬೇಲ್ ನೀಡುವಂತೆ ಸಿ.ಟಿ ರವಿ ಪರ ವಕೀಲರು ಮನವಿ ಮಾಡಿದ್ರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
Sign in to your account