newsics.com
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಹಿನ್ನೆಲೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಬೆಳಗಾವಿಯಲ್ಲಿ ಗುರುವಾರ ತಡರಾತ್ರಿ ವರೆಗೂ ಹೈಡ್ರಾಮವೇ ನಡೆದಿದೆ. ಈ ಹಿನ್ನೆಲೆ ರಾತ್ರಿ ಸುಮಾರು ಮೂರ್ನಾಲ್ಕು ಗಂಟೆಗಳ ಕಾಲ ಸಿಟಿ ರವಿ ಅವರನ್ನು ಪೊಲೀಸರು ಕಾರಿನಲ್ಲೇ ಒಂದು ಪ್ರದೇಶದಿಂದ ಮತ್ತೊಂದು ಕಡೆಗೆ ಕರೆದೊಯ್ಯುತ್ತಾ ಕಾಲಹರಣ ಮಾಡಿದ್ದಾರೆ ಎನ್ನಲಾಗಿದೆ.
ಹೌದು, ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಮಾನವೀಯತೆ ಮರೆತು ಕಾರಿನಲ್ಲೇ ಕರೆದುಕೊಂಡು ಸುತ್ತಾಟ ಮಾಡಿರುವ ಆರೋಪವೂ ಪೊಲೀಸರ ವಿರುದ್ಧ ಕೇಳಿಬಂದಿದೆ. ಅಲ್ಲದೇ, ಸಿಟಿ ರವಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಪೊಲೀಸರು ಬೆಳಗಾವಿ ಜಿಲ್ಲೆಯ ನಿರ್ಜನ ಪ್ರದೇಶ ಸೇರಿ ಜಮೀನು, ತೋಟ ಎಲ್ಲ ಕಡೆ ಸುತ್ತಾಡಿಸಿದ್ದಾರೆ.
ನಿನ್ನೆ ಸಂಜೆ ಸಿ.ಟಿ ರವಿ ಅವರನ್ನು ಬಂಧಿಸಿರುವ ಪೊಲೀಸರು ರಾತ್ರಿಯಿಡೀ ಜಿಲ್ಲೆಯನ್ನ ಸುತ್ತಾಡಿಸಿದ್ದಾರೆ. ಇದರಿಂದ ತಮಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಸಿ.ಟಿ ರವಿ ಆಕ್ರೋಶ ಹೊರಹಾಕಿದ್ದಾರೆ.