newsics.com
ಚಿಕ್ಕಮಗಳೂರು: ಪೊಲೀಸ್ ಬಂಧನ, ಜಾಮೀನು ರಾದ್ಧಾಂತದ ಬಳಿಕ ಚಿಕ್ಕಮಗಳೂರಿಗೆ ಆಗಮಿಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿನಿಂದ ಚಿಕ್ಕಮಗಳೂರಿನವರೆಗೂ ಕಾರ್ಯಕರ್ತರು ಮೆರವಣಿಗೆ, ಪುಷ್ಪಾರ್ಚನೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್ಗಳನ್ನು ಬಳಕೆ ಮಾಡಲಾಗಿದೆ. ಈ ಸಂಬಂಧ ಇದೀಗ ಎಫ್ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ.
ರೋಗಿಗಳಿಲ್ಲದಿದ್ದರೂ ಸೈರನ್ ಹಾಕಿಕೊಂಡು ಹಾಗೂ ಟಾಪ್ನಲ್ಲಿ ಲೈಟ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಚಾಲಕ, ಮಾಲೀಕರ ವಿರುದ್ಧ ಈಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಶಾಂತಿ ಭಂಗ ಆರೋಪದಡಿ ಆಂಬುಲೆನ್ಸ್ ಮಾಲೀಕ, ಚಾಲಕರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.
ಬಂಧನದಿಂದ ಮುಕ್ತವಾದ ಬಳಿಕ ಸಿಟಿ ರವಿ ಅವರು ಶನಿವಾರ (ಡಿ. 21) ಮಧ್ಯರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ಸಿ.ಟಿ ರವಿ ಅವರಿಗೆ ಭರ್ಜರಿ ಸ್ವಾಗತ ಕೋರಿದ್ದರು. ರಸ್ತೆಯುದ್ದಕ್ಕೂ ಜೈಕಾರ ಹಾಕಿ ಹೂಮಳೆಗೈದಿದ್ದರು. ಈ ಸ್ವಾಗತದ ಮೆರವಣಿಗೆಯಲ್ಲಿ 7 ಆಂಬುಲೆನ್ಸ್ಗಳು ಭಾಗಿಯಾಗಿದ್ದವು. ಚಿಕ್ಕಮಗಳೂರು ನಗರದ ಹಿರೇಮಗಳೂರಿನಿಂದ ಸಿ.ಟಿ. ರವಿ ನಿವಾಸದವರೆಗೂ ಜೋರಾಗಿ ಸೈರನ್ ಹಾಕಿಹೊಂಡು ಬಂದಿದ್ದವು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ್ದ ಆರೋಪದ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಹೈಕೋರ್ಟ್ ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.
Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ
Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್
Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ