Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಚಿಕ್ಕಮಗಳೂರು: ಪೊಲೀಸ್‌ ಬಂಧನ, ಜಾಮೀನು ರಾದ್ಧಾಂತದ ಬಳಿಕ ಚಿಕ್ಕಮಗಳೂರಿಗೆ ಆಗಮಿಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿನಿಂದ ಚಿಕ್ಕಮಗಳೂರಿನವರೆಗೂ ಕಾರ್ಯಕರ್ತರು ಮೆರವಣಿಗೆ, ಪುಷ್ಪಾರ್ಚನೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್‌ಗಳನ್ನು ಬಳಕೆ ಮಾಡಲಾಗಿದೆ. ಈ ಸಂಬಂಧ ಇದೀಗ ಎಫ್ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ.

ರೋಗಿಗಳಿಲ್ಲದಿದ್ದರೂ ಸೈರನ್ ಹಾಕಿಕೊಂಡು ಹಾಗೂ ಟಾಪ್ನಲ್ಲಿ ಲೈಟ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಚಾಲಕ, ಮಾಲೀಕರ ವಿರುದ್ಧ ಈಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಶಾಂತಿ ಭಂಗ ಆರೋಪದಡಿ ಆಂಬುಲೆನ್ಸ್ ಮಾಲೀಕ, ಚಾಲಕರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.

ಬಂಧನದಿಂದ ಮುಕ್ತವಾದ ಬಳಿಕ ಸಿಟಿ ರವಿ ಅವರು ಶನಿವಾರ (ಡಿ. 21) ಮಧ್ಯರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ಸಿ.ಟಿ ರವಿ ಅವರಿಗೆ ಭರ್ಜರಿ ಸ್ವಾಗತ ಕೋರಿದ್ದರು. ರಸ್ತೆಯುದ್ದಕ್ಕೂ ಜೈಕಾರ ಹಾಕಿ ಹೂಮಳೆಗೈದಿದ್ದರು. ಈ ಸ್ವಾಗತದ ಮೆರವಣಿಗೆಯಲ್ಲಿ 7 ಆಂಬುಲೆನ್ಸ್‌ಗಳು ಭಾಗಿಯಾಗಿದ್ದವು. ಚಿಕ್ಕಮಗಳೂರು ನಗರದ ಹಿರೇಮಗಳೂರಿನಿಂದ ಸಿ.ಟಿ. ರವಿ ನಿವಾಸದವರೆಗೂ ಜೋರಾಗಿ ಸೈರನ್ ಹಾಕಿಹೊಂಡು ಬಂದಿದ್ದವು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ್ದ ಆರೋಪದ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಹೈಕೋರ್ಟ್ ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್‌

Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ

TAGGED:FIR against 7 ambulances for welcoming MLA Ravi with siren
Share This Article
Facebook Twitter Copy Link Print
Previous Article expensive watch ವಿಶ್ವದ ಅತ್ಯಂತ ದುಬಾರಿ ವಾಚ್ ಯಾವುದು ಅಂತ ಗೊತ್ತಾ?
Next Article Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ‌ ಚರ್ಚೆಗೆ ಗ್ರಾಸ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?