newsics.com
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್ ಅವರು ಸಚಿವ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.
ಗೃಹ ಇಲಾಖೆ, ಇಂಧನ ಇಲಾಖೆ ಹಾಗೂ ಸಾಮಾನ್ಯ ಆಡಳಿತ ಖಾತೆ ಸೇರಿದಂತೆ ಅನೇಕ ಪ್ರಬಲ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಗಳ ಉಸ್ತುವಾರಿ ವಹಿಸಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಅಬಕಾರಿ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಡ ಭರ್ಜರಿ ಗೆಲುವು ಸಾಧಿಸಿತು. ಆ ನಂತರ ದೇವೇಂದ್ರ ಫಡ್ನವಿಸ್ ಸಿಎಂ ಆಗಿ, ಏಕನಾಥ್ ಶಿಂಧೆ, ಅಜಿತ್ ಪವಾರ್ ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಲಾಗಿದ್ದು, ಅದರ ಕಂಪ್ಲೀಟ್ ಲಿಸ್ಟ್ ಈ ಕೆಳಕಂಡಂತಿದೆ.
ಬಿಜೆಪಿ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳು
- ಚಂದ್ರಶೇಖರ ಬಾವನಕುಳೆ – ಕಂದಾಯ
- ರಾಧಾಕೃಷ್ಣ ವಿಖೆ ಪಾಟೀಲ್ – ಜಲ ಸಂಪನ್ಮೂಲ, ಕೃಷ್ಣಾ ಮತ್ತು ಗೋದಾವರಿ ಕಣಿವೆ ಅಭಿವೃದ್ಧಿ ನಿಗಮ
- ಚಂದ್ರಕಾಂತ್ ಪಾಟೀಲ್ – ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಸಂಸದೀಯ ವ್ಯವಹಾರ
- ಗಿರೀಶ್ ಮಹಾಜನ್ – ಜಲ ಸಂಪನ್ಮೂಲ, ವಿದರ್ಭ, ತಾಪಿ, ಕೊಂಕಣ ಅಭಿವೃದ್ಧಿ ನಿಗಮ ಮತ್ತು ವಿಪತ್ತು ನಿರ್ವಹಣೆ
- ಗಣೇಶ್ ನಾಯಕ್ – ಅರಣ್ಯ, ಮಂಗಲ್ ಪ್ರಭಾತ್ ಲೋಧಾ ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಉದ್ಯಮಶೀಲತೆ ಮತ್ತು ನಾವೀನ್ಯತೆ
- ಜಯಕುಮಾರ್ ರಾವಲ್ – ಮಾರ್ಕೆಟಿಂಗ್ ಮತ್ತು ಪ್ರೋಟೋಕಾಲ್
- ಪಂಕಜಾ ಮುಂಡೆ – ಪರಿಸರ ಮತ್ತು ಹವಾಮಾನ ಬದಲಾವಣೆ, ಪಶುಸಂಗೋಪನೆ, ಅತುಲ್ ಸೇವಾ ಒಬಿಸಿ ಕಲ್ಯಾಣ, ಡೈರಿ ಅಭಿವೃದ್ಧಿ ಮತ್ತು ನವೀಕರಿಸಬಹುದಾದ ಇಂಧನ.
- ಅಶೋಕ್ ಉಯಿಕೆ – ಬುಡಕಟ್ಟು ಅಭಿವೃದ್ಧಿ, ಆಶಿಶ್ ಶೆಲಾರ್ ಸಾಂಸ್ಕೃತಿಕ ವ್ಯವಹಾರಗಳು ಮತ್ತು ಮಾಹಿತಿ ತಂತ್ರಜ್ಞಾನ
- ಶಿವೇಂದ್ರಸಿನ್ಹ ಭೋಸಲೆ – ಸಾರ್ವಜನಿಕ ಕಾರ್ಯ (ಪಬ್ಲಿಕ್ ವರ್ಕ್).
- ಜಯಕುಮಾರ್ ಗೋರ್ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
- ಸಂಜಯ್ ಸಾವ್ಕರೆ – ಜವಳಿ
- ನಿತೇಶ್ ರಾಣೆ – ಮೀನುಗಾರಿಕೆ ಮತ್ತು ಬಂದರು
- ಆಕಾಶ್ ಫಂಡ್ಕರ್ – ಕಾರ್ಮಿಕ ಇಲಾಖೆ