newsics.com
ಲಕ್ನೋ: ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿ, ಆಕೆ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಲ್ಲಿ ನಡೆದಿದೆ.
ಪೊಲೀಸರ ವರದಿಯ ಪ್ರಕಾರ, ಕಳೆದ 8 ವರ್ಷಗಳಿಂದ ಆರೋಪಿ ಮಹಿಳೆ ಹಾಗೂ ಗಾಯಾಳು ಯುವಕ ಸಂಬಂಧವನ್ನು ಇಟ್ಟುಕೊಂಡಿದ್ದರು, ಅಲ್ಲದೇ ನಿನ್ನನ್ನೇ ಮದುವೆಯಾಗುವುದಾಗಿ ಕೂಡ ನಂಬಿಸಿದ್ದ..
ಆದರೆ ಯುವಕ ಬೇರೆ ಯುವತಿಯನ್ನು ಮದುವೆಯಾಗಲು ಸಿದ್ಧನಾಗಿದ್ದಾನೆ. ಈ ವಿಷಯ ಆತನ ಗೆಳತಿಗೆ ತಿಳಿಯಿತು. ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯೋಚಿಸಿದಳು. ಇದೇ ವೇಳೆ ಮಹಿಳೆ ತನ್ನ ಪ್ರಿಯಕರನನ್ನು ಕೊನೆಯ ಬಾರಿಗೆ ಭೇಟಿಯಾಗಲು ಕರೆದಿದ್ದಾಳೆ. ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನಲೆಯಲ್ಲಿ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಬಳಿಕ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಮತ್ತೊಂದೆಡೆ ಆ ವ್ಯಕ್ತಿ ತನ್ನ ಖಾಸಗಿ ಅಂಗಕ್ಕೆ ಪೆಟ್ಟು ಬಿದ್ದು ರಕ್ತಸ್ರಾವವಾಗುತ್ತಿದ್ದರೂ ಗೆಳತಿಯ ಕೈ ಗಾಯಕ್ಕೆ ಬಟ್ಟೆ ತೊಡಿಸಿ ಆಕೆಯ ಪ್ರಾಣ ಉಳಿಸಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಇಬ್ಬರು ಕೂಡ ಚಿಕಿತ್ಸೆ ಪಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಯುವತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.