newsics.com
ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿ ಸಾವನ್ನಪ್ಪಿದ್ದಾರೆ.
ಭಾನುವಾರ ಚಿತ್ರದುರ್ಗದಲ್ಲಿ ನಡೆದ ನಟ ಸುದೀಪ್ ಅವರ ಮ್ಯಾಕ್ಸ್ ಸಿನಿಮಾ ಪ್ರೀ ರಿಲೀಸ್ ಇವೆಂಟ್ ನೋಡಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಸುನೀಗಿದ ವ್ಯಕ್ತಿ ಪಾಪೇನಹಳ್ಳಿ ಗ್ರಾಮದ ಹರಳಯ್ಯ. 28 ವರ್ಷದ ಹರಳಯ್ಯ ಆಟೋದಲ್ಲಿ ಮ್ಯಾಕ್ಸ್ ಸಿನಿಮಾ ಪ್ರೀ ರಿಲೀಸ್ ಇವೆಂಟ್ ನೋಡಲು ಚಿತ್ರದುರ್ಗಕ್ಕೆ ಬಂದಿದ್ದರು.
ಚಿತ್ರದುರ್ಗದಿಂದ ಪಾಪೇನಹಳ್ಳಿಗೆ ವಾಪಸ್ ಹೋಗುವಾಗ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯ್ತು. ಈ ವೇಳೆ ಚಿಕಿತ್ಸೆ ಫಲಿಸದೇ ಇವರು ಜೀವಬಿಟ್ಟಿದ್ದಾರೆ. ಚಿತ್ರದುರ್ಗದ ಸೈನ್ಸ್ ಕಾಲೇಜು ಆವರಣದಲ್ಲಿ ಇವೆಂಟ್ ನಡೆದಿತ್ತು.