newsics.com
ಮಂಡ್ಯ: ಬೆಲ್ಲದ ವ್ಯಾಪಾರಿಯೊಬ್ಬರ ಕಾರಿಗೆ ದುಷ್ಕರ್ಮಿಗಳು ಮೊಟ್ಟೆ ಎಸೆದು, ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಮಂಡ್ಯದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ನಡೆದಿದೆ.
ಮಂಡ್ಯದ ಗುತ್ತಲು ನಿವಾಸಿ ವಿನೋದ್ ದರೋಡೆಗೆ ಒಳಗಾದ ವ್ಯಾಪಾರಿ. ಇವರು ಮದ್ದೂರಿನಲ್ಲಿ ವ್ಯಾಪಾರ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.
ಇನ್ನು ಕಾರಿನಲ್ಲಿದ್ದ 55 ಸಾವಿರ ರೂಪಾಯಿಗಳನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸದ್ಯ ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.