newsics.com
ಹೈದರಾಬಾದ್: ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸ್ ವಿಚಾರಣೆಗೆ ನಟ ಅಲ್ಲು ಅರ್ಜುನ್ ಹಾಜರಾಗಿದ್ದಾರೆ.
ವಕೀಲರ ಜತೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬಂದ ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವ ಮುನ್ನ ತಮ್ಮ ಪತ್ನಿ, ಮಕ್ಕಳನ್ನು ಅಪ್ಪಿಕೊಂಡು ತೆರಳಿದ್ದಾರೆ.
ಪುಷ್ಪ-2 ಪ್ರೀಮಿಯರ್ ಶೋ ವೇಳೆ ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸ್ ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ.
ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ಬಳಿಕ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ರೇವತಿ ಮೃತಪಟ್ಟಿದ್ದರು. 8 ವರ್ಷದ ಪುತ್ರ ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
https://twitter.com/i/status/1871422177612075470
https://twitter.com/i/status/1871429986676264981
Annabhagya Yojana ತೆರೆ ಮೇಲೆ ಬರಲಿದೆ ಅನ್ನಭಾಗ್ಯ ಯೋಜನೆ ಕುರಿತ ಸಿನಿಮಾ
Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ
Samsung employees fired ಸ್ಯಾಮ್ಸಂಗ್ Galaxy S25+ ಸರಣಿಯ ಅಲ್ಟ್ರಾ ಫೋನ್ ಫೋಟೋ ಲೀಕ್: ಹಲವು ಉದ್ಯೋಗಿಗಳು ವಜಾ