newsics.com
ನವದೆಹಲಿ : ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದೀಗ ಆತನನ್ನು ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಈ ವ್ಯಕ್ತಿ ಬೆಂಕಿ ಹಚ್ಚಿಕೊಂಡಿದ್ದಾನೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ.
ಸಂಸತ್ನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ವೇಳೆ ಇಂತಹ ಘಟನೆ ನಡೆದಿದೆ. ಇದೀಗ ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವ್ಯಕ್ತಿಯ ದೇಹದ 90 ರಷ್ಟು ಭಾಗ ಸುಟ್ಟ ಗಾಯಗಳಾಗಿವೆ. ತಕ್ಷಣ ಸಂಸತ್ತಿನ ಮುಂಭಾಗದಲ್ಲಿ ಪೊಲೀಸರು ಆತನನ್ನು ನಗರದ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.