newsics.com
ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ದಾಳಿ ಮಾಡಿದ್ದಾರೆ. ಇದರ ನಡುವೆ ಅವರ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ನೀಡುವಂತೆ ಎಸ್ಐಟಿ ಮನವಿ ಸಲ್ಲಿಸಿದೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ಎಸ್ಐಟಿ ತಂಡ ಮನವಿ ಸಲ್ಲಿಸಿದೆ
ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ನೀಡುವಂತೆ ಮುನಿರತ್ನ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜು ಆರೋಪಿಸಿದ್ದರು. ಈ ಆರೋಪ ಹಿನ್ನಲೆ ಶಾಸಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಲು ಪ್ರಾಸಿಕ್ಯೂಶನ್ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಮುನಿರತ್ನ ವಿರುದ್ಧ ಮೊಟ್ಟೆ ದಾಳಿ ಮಾಡಿದ ಬೆನ್ನಲ್ಲೆ ವೈದ್ಯರ ಸಲಹೆ ಮೇರೆಗೆ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡ ನೀಡಲಾಗಿದೆ.