newsics.com
ಚಿಕ್ಕಮಗಳೂರು: ಹೊಟ್ಟೆ ನೋವು ತಾಳಲಾರದೆ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಬಿಂದು (21) ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.
ಬಿಂದು ಕಳೆದ ನವೆಂಬರ್ 24ರಂದು ಮದುವೆಯಾಗಿದ್ದಳು. ಮದುವೆಯಾಗಿ ಕೇವಲ ಒಂದು ತಿಂಗಳು ಮೂರು ದಿನವಾಗಿದೆ ಅಷ್ಟೆ. ಮೂಲತಃ ತರೀಕೆರೆ ತಾಲೂಕಿನ ಗುಳ್ಳದಮನೆ ನಿವಾಸಿ ಬಿಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಂತೇನಹಳ್ಳಿ ಮೂಲಕ ಪ್ರಸನ್ನಕುಮಾರ್ ಎಂಬುವರಿಗೆ ಮದುವೆ ಮಾಡಲಾಗಿತ್ತು. ಬಿಂದು ಮದುವೆಯನ್ನೂ ಖುಷಿಯಿಂದಲೇ ಆಗಿದ್ದಳು. ಕಳೆದ ಮೂರು ದಿನದ ಹಿಂದೆ ಗಂಡನ ಜತೆ ತವರುಮನೆಗೆ ಬಂದಿದ್ದಳು. ಮೂರು ದಿನದಿಂದ ದೇವಸ್ಥಾನಗಳಿಗೆ ಹೋಗುತ್ತಿದ್ದ ದಂಪತಿ ಮನೆಯಲ್ಲಿನ ಪೂಜೆಯಲ್ಲೂ ಪಾಲ್ಗೊಂಡಿದ್ದರು.
ಶುಕ್ರವಾರ ತೀವ್ರ ಹೊಟ್ಟೆನೋವು ತಾಳಲಾರದೆ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಿಂದುವಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಹೊಟ್ಟೆನೋವು ಇತ್ತು. ಅದು ಪಿರಿಯಡ್ಸ್ ಟೈಮಿನಲ್ಲಿ ತೀವ್ರ ಹೆಚ್ಚಾಗುತ್ತಿತ್ತು. ಈ ಬಗ್ಗೆ ಕುಟುಂಬಸ್ಥರು ಆಸ್ಪತ್ರೆಗೂ ತೋರಿಸಿದ್ದರು. ಆದರೆ, ನೋವು ಕಡಿಮೆಯಾಗಿರಲಿಲ್ಲ.
ಸ್ಥಳಕ್ಕೆ ತರೀಕೆರೆ ತಹಸಿಲ್ದಾರ್ ಭೇಟಿ ನೀಡಿ ಶವ ಪರೀಕ್ಷೆ ನಡೆಸಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ, ಪ್ರತಿಭಟನೆ
ಗರ್ಲ್ಫ್ರೆಂಡ್ ಜೊತೆ ಲಿಪ್ಲಾಕ್ ಮಾಡುತ್ತಾ ಕಾರು ಓಡಿಸಿದ ಯುವಕ : video viral
Bengulru : ಒಂದು ಹೊತ್ತಿನ ಊಟಕ್ಕೆ 5 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ವ್ಯಕ್ತಿ
Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ