newsics.com
ಹಾವೇರಿ: ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ದಿಢೀರ್ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಸೋಮವಾರ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸ್ಕಾರ್ಪಿಯೋ ಕಾರಿಗೆ ಏಕಾಏಕಿ ಬೆಂಕಿ ಹತ್ತಿ ಧಗಧಗನೇ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದ ನಾಲ್ವರು ಗೋವಾಕ್ಕೆ ಹೋಗಿ
ಬೆಂಗಳೂರಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸುವಷ್ಟರಲ್ಲಿಯೇ ಕಾರು ಉರಿದು ಭಸ್ಮವಾಗಿತ್ತು. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹ*ತ್ಯೆ
cigarette kills life ಒಂದು ಸಿಗರೇಟ್ನಿಂದ ಮಹಿಳೆಯರ 22 ನಿಮಿಷ, ಪುರುಷರ 17 ನಿಮಿಷ ಜೀವಿತಾವಧಿ ನಾಶ!