newsics.com
ಬೆಂಗಳೂರು: ಕರ್ನಾಟಕದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.
ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ರಾಜ್ಯದ ಶಕ್ತಿ ಯೋಜನೆಯತ್ತ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಚಿತ್ತ ನೆಟ್ಟಿದೆ.
ಆಂಧ್ರದ ಸಚಿವರು ಹಾಗೂ ಅಧಿಕಾರಿಗಳ ನಿಯೋಗ ನಾಳೆ (ಜ.2ಕ್ಕೆ) ರಾಜ್ಯಕ್ಕೆ ಭೇಟಿ ನೀಡಲಿದೆ. ಬೆಂಗಳೂರಿಗೆ ಆಗಮಿಸಿ ಶಕ್ತಿ ಯೋಜನೆ ಬಗ್ಗೆ ಅಧ್ಯಯನ ನಡೆಸಲಿದೆ.

ಆಂಧ್ರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ಶೆಟ್ಟಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಸೇರಿ ಹಿರಿಯ ಅಧಿಕಾರಿಗಳ ಸುಮಾರು 15 ಸದಸ್ಯರ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ. ಜ.3ರಂದು ಸಿಎಂ, ಸಾರಿಗೆ ಸಚಿವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಭೇಟಿಯಾಗಿ ಶಕ್ತಿ ಯೋಜನೆಯ ಬಗ್ಗೆ ಮಾಹಿತಿ ಪಡೆಯಲಿದೆ.
ಆಂಧ್ರ ಪ್ರದೇಶ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಜ.3ಕ್ಕೆ ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಶಕ್ತಿ ಯೋಜನೆ ಅನುಷ್ಠಾನ, ಹಣಕಾಸು ನಿರ್ವಹಣೆ, ಹೊರೆ, ನಿರ್ವಹಣೆ, ಮಾನದಂಡಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಶಕ್ತಿ ಯೋಜನೆಯ ಯಶಸ್ಸು, ರಸ್ತೆ ಸಾರಿಗೆ ನಿಗಮ ತೆಗೆದುಕೊಂಡ ಕ್ರಮಗಳ ಬಗ್ಗೆ ನಿಯೋಗಕ್ಕೆ ವಿವರಿಸಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
New generation starts ಇಂದಿನಿಂದ ಹೊಸ ಪೀಳಿಗೆ ಶುರು, ಇನ್ನು ಹುಟ್ಟುವವರೆಲ್ಲ ಬೀಟಾ ಮಕ್ಕಳು…! ಏನಿದು ಬೀಟಾ ಬೀಟ್?
Country’s first glass bridge ಕನ್ಯಾಕುಮಾರಿಯಲ್ಲಿ ದೇಶದ ಮೊದಲ ಗಾಜಿನ ಸೇತುವೆ! ಏನಿದರ ವಿಶೇಷತೆ?
HAPPY NEW YEAR 2025 ಹೊಸ ವರ್ಷದ ಶುಭಾಶಯಗಳು… ಹೊಸ ವರ್ಷದ ಮೊದಲ ದಿನ ಹೀಗಿರಿ… ಇದನ್ನೆಲ್ಲ ಮಾಡಲೇಬೇಡಿ…