newsics.com
ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ.
ಗೀತಾ ಬಡಗಿ(28), ಮಕ್ಕಳಾದ ಶ್ರವಣ್(6), ಶರಣ್(4) ನೀರುಪಾಲಾದವರು. ಮೃತ ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.
ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.