newsics.com
ಬೆಂಗಳೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಕಟ್ಟಡದಿಂದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಶನಿವಾರ ನಡೆದಿದೆ.
ತೇಜಸ್ವಿನಿ ಮೃತ ಬಾಲಕಿ. ಶನಿವಾರ ಮಧ್ಯಾಹ್ನ ಶಾಲೆಯಿಂದ ಮನೆಗೆ ತೆರಳುವ ಸಂದರ್ಭದಲ್ಲಿ ವಿವಿ ಪುರಂ ಬಳಿಯ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ 4ನೇ ಮಹಡಿಯಿಂದ ಮರದ ತುಂಡೊಂದು ಏಕಾಏಕಿ ಬಾಲಕಿ ತೇಜಸ್ವಿನಿ ಮೇಲೆ ಬಿದ್ದಿದ್ದು, ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೇಜಸ್ವಿನಿ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲೂ ಪಾಲ್ಗೊಂಡಿದ್ದ ಪ್ರತಿಭಾವಂತೆ.
Divorce shortly ಯಜುವೇಂದ್ರ ಚಹಾಲ್- ಧನಶ್ರೀ ಸೋಷಿಯಲ್ ಮೀಡಿಯಾದಲ್ಲೂ ದೂರ, ಶೀಘ್ರದಲ್ಲೇ ವಿಚ್ಛೇದನ