ಹೃದಯಾಘಾತದಿಂದ ತರಗತಿಯಲ್ಲೇ ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ

newsics.com ಚಾಮರಾಜನಗರ: ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು- ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಸೋಮವಾರ ಕುಸಿದುಬಿದ್ದು ಮೃತಪಟ್ಟ ವಿದ್ಯಾರ್ಥಿನಿ. ತೇಜಸ್ವಿನಿ ಸೋಮವಾರ ಎಂದಿನಂತೆ ಶಾಲೆಗೆ ಹೋಗಿದ್ದು, ಕ್ಲಾಸ್ನಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಾಗ ಏಕಾಏಕಿ ಕುಸಿದುಬಿದ್ದು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಕೂಡಲೇ ತೇಜಸ್ವಿನಿಯನ್ನು ಜೆಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದುರದೃಷ್ಟವಶಾತ್ … Continue reading ಹೃದಯಾಘಾತದಿಂದ ತರಗತಿಯಲ್ಲೇ ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ