newsics.com
ಚಿಕ್ಕಮಗಳೂರು: ಕರ್ನಾಟಕ, ಕೇರಳ, ಆಂಧ್ರ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ.
ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದು, ಮೂರು ದಿನಗಳಲ್ಲಿ ಆರು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿದ ಎದುರು ಶರಣಾಗುವ ಸಾಧ್ಯತೆಯಿದೆ.
ಶಾಂತಿಗಾಗಿ ನಾಗರಿಕ ವೇದಿಕೆಗೆ ನಕ್ಸಲರು ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ನಾಗರಿಕ ವೇದಿಕೆಯ ಸದಸ್ಯರು ಚರ್ಚಿಸಿದ್ದಾರೆ. ಕಳೆದ 3 ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಕಂಡುಬಂದಿದ್ದವು.
ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯುತವಾಗಿ ನಡೆಯಬೇಕು. ನಕ್ಸಲರ ಆತ್ಮಗೌರವಕ್ಕೆ ಧಕ್ಕೆಯಾಗಬಾರದು.
ನಕ್ಸಲರು ಹೊರಬಂದ ನಂತರ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸುವಂತೆ ಬೇಡಿಕೆ ಇಡಲಾಗಿದೆ. ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯ ವ್ಯಾಪ್ತಿಗೆ ತಂದು ತ್ವರಿತ ವಿಚಾರಣೆ ಮಾಡುವಂತೆ ಕೋರಿದ್ದಾರೆ. ಶರಣಾಗುವ ನಕ್ಸಲರಿಗೆ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲೀಯರಿಗೆ ಶರಣಾಗುವಂತೆ ಕರೆ ನೀಡಿದ್ದರು. ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದ್ದರು.
ಶರಣಾದ ನಕ್ಸಲೀಯರಿಗೆ ಹಂತ ಹಂತವಾಗಿ ಆರ್ಥಿಕ ನೆರವು, ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮ ವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದರು.
Parents beware! ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!
ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ