newsics.com
ಹೈದರಾಬಾದ್: ತಮ್ಮ ಕಾರಿಗೆ ತಾವೇ ಬೆಂಕಿ ಹಚ್ಚಿಕೊಂಡು ಯುವಕ ಹಾಗೂ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಘಾಟ್ಕೇಸರ್ ನ ಘನಪುರ್ ಹೊರ ವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಇವರಿಬ್ಬರ ಖಾಸಗಿ ವೀಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಇದರಿಂದ ಹೆದರಿದ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ರಸ್ತೆ ಮಧ್ಯದಲ್ಲೇ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಬೆಂಕಿಗೆ ಆಹುತಿಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಲ್ಗೊಂಡ ಜಿಲ್ಲೆಯ ಬೀಬಿನಗರ ನಿವಾಸಿ ಪಾರ್ವತಮ್ಮ ಶ್ರೀರಾಮ್ ನರಪಲ್ಲಿಯಲ್ಲಿರುವ ಸೈಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಶ್ರೀರಾಮ್ ಸೈಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹುಡುಗಿಯನ್ನು ಭೇಟಿಯಾದ. ಅವರಿಬ್ಬರೂ ಆಪ್ತ ಸ್ನೇಹಿತರಾದರು ಮತ್ತು ಪರಸ್ಪರ ಪ್ರೀತಿಸುತ್ತಿದ್ದರು ಎಂದು ವರದಿಯಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹೇಶ್ ಎಂದೂ ಕರೆಯಲ್ಪಡುವ ಚಿಂಟು ಎಂಬ ವ್ಯಕ್ತಿಯ ಕಿರುಕುಳದಿಂದಾಗಿ ಪ್ರೇಮಿಗಳಿಬ್ಬರು ಅತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಚಿಂಟು ಪ್ರೇಮಿಗಳಿಬ್ಬರ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಂಡು ಅವರನ್ನು ಬ್ಲ್ಯಾಕ್ಮೇಲ್ ಮಾಡಲು ಬಳಸಿದ್ದರು. ಹಣ ನೀಡದಿದ್ದರೆ ತಮ್ಮ ಸಂಬಂಧವನ್ನು ಅವರ ಕುಟುಂಬಗಳಿಗೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ನಲ್ಲಿ ಬರೆದಿರುವುದಾಗಿ ತಿಳಿದುಬಂದಿದೆ.
ಶ್ರೀರಾಮ್ ಚಿಂಟುಗೆ 1.35 ಲಕ್ಷ ರೂ.ಗಳನ್ನು ಪಾವತಿಸಿದ್ದರೂ ಹೆಚ್ಚಿನ ಹಣಕ್ಕಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ. ಚಿಂಟುವಿನ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗದೆ ಮತ್ತು ಬೇರೆ ಆಯ್ಕೆಗಳಿಲ್ಲದೆ, ಈ ಜೋಡಿ ಆತ್ಮಹತ್ಯೆಗೆ ಶರಣಾಗಿದೆ.
https://twitter.com/i/status/1876587502561358122
https://x.com/NewsMeter_In/status/1876265926078898552?t=_8Y5_KDg0zMxNTeYvd3LCA&s=19