newsics.com
ಶಿರಸಿ: ಶಿರಸಿ ವಲಯ ಅರಣ್ಯಾದಿಕಾರಿಗಳು ನಡೆಸಿದ ಕ್ಷೀಪ್ರ ಕಾರ್ಯಚರಣೆಯಲ್ಲಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಜಾತಿಯ 92 ನಾಟಗಳನ್ನು ಆರೋಪಿ ಸಮೇತವಾಗಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಮಾದೇವ ರಾಮಚಂದ್ರ ವಡ್ಡಾ ಹಾಗು ಶಿರಸಿ ನಗರದ ಕೊಪ್ಪಳ ಕಾಲೋನಿಯ ಜಗದೀಶ ಮಾದೇವ ಗುಡಿಗಾರ ಬಂಧಿತ ಆರೋಪಿಗಳಾಗಿದ್ದಾರೆ.
ಈ ಆರೋಪಿಗಳು ಚಂದನ್ ವುಡ್ ವರ್ಕ್ಸ್ & ಫರ್ನಿಚರ್ ಹತ್ತಿರ ಲಾರಿ ಮೇಲೆ ಸುಮಾರು 3 ಲಕ್ಷ ಬೆಲೆಯ ನಾಟಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ.
ಉಪ ಅರಣ್ಯ ಸಂರಕ್ಷಣಾದಿಕಾರಿ ಡಾ.ಅಜ್ಜಯ್ಯ, ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾದಿಕಾರಿ ಅಶೋಕ ಕೆ ಎಚ್ ಹಾಗು ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ಎಸ್ ಎಸ್ ನಿಂಗಾಣಿ ಮಾರ್ಗದರ್ಶನ, ಶಿರಸಿ ವಲಯ ಅರಣ್ಯಾಧಿಕಾರಿ ಗಿರೀಶ ಎಲ್ ನಾಯ್ಕ ಮತ್ತು ಅರಣ್ಯ ಸಂಚಾರಿ ದಳದ ಅರಣ್ಯಾಧಿಕಾರಿ ಶಿಲ್ಪಾ ನಾಯ್ಕ ನೇತೃದಲ್ಲಿ ನಡೆದ ಕಾರ್ಯಚರಣೆಯಲ್ಲಿ ಇನ್ನಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.