newsics.com
ಚಾಮರಾಜನಗರ: ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮಿತಿ ಮೀರಿದೆ. ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ.
ಈ ಫೈನಾನ್ಸ್ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು ಆಧಾರ್ ಕಾರ್ಡ್ ಜೆರಾಕ್ಸ್ ಪಡೆದು ಸುಲಭವಾಗಿ ಸಾಲ ನೀಡುತ್ತಿವೆ. ಸುಲಭವಾಗಿ ಸಾಲ ಸಿಗುತ್ತೆ ಎಂಬ ಕಾರಣಕ್ಕೆ ಕೂಲಿ ಕಾರ್ಮಿಕರು, ಮಹಿಳೆಯರು ಇವರ ಸಾಲದ ಜಾಲಕ್ಕೆ ಬಿದ್ದು ದೈನಂದಿನ ವ್ಯವಹಾರಗಳಿಗೆ ಸಾಲ ಪಡೆಯುತ್ತಿದ್ದಾರೆ. ಬಡ್ಡಿಯೊಂದಿಗೆ ವಾರದ ಕಂತು, ತಿಂಗಳ ಕಂತು ಹೀಗೆ ಸಾಲ ತೀರಿಸುತ್ತಾರೆ. ಆದರೆ ಸಾಲ ಮರುಪಾವತಿ ಮಾಡುವುದು ಒಂದು ದಿನ ತಡವಾದರೂ ಹೊತ್ತಲ್ಲದ ಹೊತ್ತಿನಲ್ಲಿ ಕಿರುಕುಳ ನೀಡುತ್ತಿದ್ದಾರೆ.