newsics.com
ಬೆಂಗಳೂರು : ಹಸುವಿನ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಂಸದ ಪಿ.ಸಿ ಮೋಹನ್ ಹಸುವಿನ ಮಾಲೀಕನಿಗೆ 2 ಹಸು ಹಾಗೂ ಒಂದು ಕರುವನ್ನು ನೀಡಿದ್ದಾರೆ.
ಹಸು ನೀಡುವ ಮುನ್ನ, ಹಸು ಹಾಗೂ ಕರುವಿಗೆ ಚಾಮರಾಜಪೇಟೆಯ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿಸಲಾಯಿತು. ಬಳಿಕ ಹಸುವನ್ನು ಕರ್ಣ ಅವರ ಸುಪರ್ದಿಗೆ ನೀಡಲಾಗಿದೆ.
ಹಸು ಮಾಲೀಕ ಕರ್ಣನಿಗೆ ಸಾಂತ್ವನ ಮಾಡಿದ ಸಂಸದರು. ನಾನು ವೈಯಕ್ತಿಕವಾಗಿ ಹಸುವನ್ನು ನೀಡಿದ್ದೇನೆ ಎಂದಿದ್ದಾರೆ.