newsics.com
ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ (ಬೇನಾಳ ಬ್ರಿಜ್ , ಪಾರ್ವತಿಕಟ್ಟಾ ಸೇತುವೆ ಸಮೀಪ) ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಸಾವಿಗೀಡಾದವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಎಂದು ಗುರುತಿಸಲಾಗಿದೆ.
ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೃತ ಮಕ್ಕಳ ತಾಯಿ ಭಾಗ್ಯಳನ್ನು ಮೀನುಗಾರರು ಕಾಲುವೆಯಿಂದ ಎತ್ತಿ ಬದುಕಿಸಿದ್ದಾರೆ. ಬಳಿಕ ಘಟನೆ ಬಗ್ಗೆ ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದು, ನಾವಾಗಿಯೇ ಕಾಲುವೆಗೆ ಜಿಗಿದಿಲ್ಲ. ಗಂಡನೇ ನಮ್ಮನ್ನು ಕಾಲುವೆಗೆ ತಳ್ಳಿದ್ದಾನೆ ಎಂದು ದೂರಿದ್ದಾರೆ.
ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು ಹೇಳಲಾಗಿದೆ.
Pistachio shell ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು