ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ

newsics.com ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೂರು ಹಸುಗಳ ಕೆಚ್ಚಲು‌ ಕೊಯ್ದು ವಿಕೃತಿ ಮೆರೆದ ಬೆನ್ನಲ್ಲೇ ಮೈಸೂರು ಜಿಲ್ಲೆ ನಂಜನಗೂಡಿನಲ್ಲೂ ಕರುವಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದೇವಸ್ಥಾನದಲ್ಲಿ ಹರಕೆಗೆ ಬಿಟ್ಟ ಕರುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾರೆ. ಕರುವಿನ ಹಿಂಬದಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಬಾಲ ತುಂಡಾಗುವ ಸ್ಥಿತಿಯಲ್ಲಿದೆ. ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗೋ ಕಳ್ಳಸಾಗಣೆದಾರರು ಹರಕೆಗೆ ಬಿಟ್ಟ … Continue reading ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ