newsics.com
ದಕ್ಷಿಣ ಕನ್ನಡ :ಗುಂಡಿಕ್ಕಿ ಪತ್ನಿಯನ್ನು ಕೊಂದು ಆ್ಯಸಿಡ್ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ.
ರಾಮಚಂದ್ರ ಎಂಬಾತ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ಭಯಕ್ಕೆ ತಾನೂ ಕೂಡ ಆಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಡಿದ ಮತ್ತಿನಲ್ಲಿ ರಾಮಚಂದ್ರ ಪತ್ನಿ ಜೊತೆ ಗಲಾಟೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.