newsics.com
ಪ್ರಯಾಗ್ರಾಜ್: ಪ್ರಯಾಗರಾಜ್ಗೆ ಆಗಮಿಸಿರುವ ಭಕ್ತರು, ಸಾಧುಗಳು, ಸಂತರಿಗೆ ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಬೆಂಕಿಯ ಕೆನ್ನಾಲಿಗೆ ಹರಡಿ ಹಲವು ಟೆಂಟ್ಗಳು ನಾಶವಾಗಿವೆ. ಬೆಂಕಿಯ ಜ್ವಾಲೆಗೆ ಮಹಾಕುಂಭ ಮೇಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಕ್ಷಣವೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದೆ.
ಅಹಿತಕರ ಘಟನೆ ನಡೆಯದಂತೆ ಎಲ್ಲಾ ಕಟ್ಟೆಚ್ಚರ ವಹಿಸಲಾಗಿದೆ. ಇದರ ನಡುವೆ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಮಹಾಕುಂಭ ಮೇಳ ಆರಂಭಕ್ಕೂ ಮೊದಲೇ ನೂರಾರು ಅಗ್ನಿಶಾಮಕ ದಳ ನಿಯೋಜಿಸಲಾಗಿದೆ. ಹೀಗಾಗಿ ತಕ್ಷಣವೇ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ವಿಶ್ವವೇ ಅಚ್ಚರಿಪಡುವಂತೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ಆಯೋಜನೆಗೊಂಡಿದೆ. ಪ್ರತಿ ದಿನ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ.
https://twitter.com/i/status/1880933125309747277
Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ