newsics.com
ಜೈಪುರ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅವರ ಮನೆಯವರು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆ್ಯಂಬುಲೆನ್ಸ್ ಆಸ್ಪತ್ರೆ ತಲುಪಿದಾಗ ಆ ಆ್ಯಂಬುಲೆನ್ಸ್ನ ಬಾಗಿಲು ಸುಮಾರು 15 ನಿಮಿಷಗಳ ಕಾಲ ತೆರೆಯಲಾಗದೆ ಮಹಿಳೆ ಸಾವನ್ನು ಪ್ಪಿದ್ದಾಳೆ. ರಾಜಸ್ಥಾನದ ಭಿಲ್ವಾರಾದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.
ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬವಾಯಿತು. ಆ್ಯಂಬುಲೆನ್ಸ್ ಬಾಗಿಲು ತೆರೆಯುವಷ್ಟರಲ್ಲಿ ಆ ಮಹಿಳೆ ಒಳಗೇ ಸಾವನ್ನಪ್ಪಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಆ್ಯಂಬುಲೆನ್ಸ್ನಲ್ಲಿ ಆಮ್ಲಜನಕ ಸೌಲಭ್ಯವಿರಲಿಲ್ಲ ಎಂಬ ಆರೋಪವೂ ಇದೆ.
ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ಗೆ ಕರೆ ಮಾಡಿದರು. ಆಸ್ಪತ್ರೆ ತಲುಪಿದಾಗ ಆ್ಯಂಬುಲೆನ್ಸ್ ಬಾಗಿಲು ತೆರೆದಾಗ ಅದು ತೆರೆಯಲಿಲ್ಲ. ಆ್ಯಂಬುಲೆನ್ಸ್ನ ಬಾಗಿಲು ಸಿಕ್ಕಿಹಾಕಿಕೊಂಡಿತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಆ್ಯಂಬುಲೆನ್ಸ್ ಬಾಗಿಲು ಓಪನ್ ಮಾಡಲು 15 ನಿಮಿಷ ಪ್ರಯತ್ನಪಟ್ಟರೂ ಸಾಧ್ಯವಾಗದೆ ಇದ್ದಾಗ ಕಿಟಕಿ ಒಡೆದು ಒಳಗಿದ್ದ ಆ ಮಹಿಳೆಯನ್ನು ಹೊರಗೆಳೆದರು. ಅಷ್ಟರಲ್ಲಿ ಆ ಮಹಿಳೆ ಸಾವನ್ನಪ್ಪಿದ್ದರು.