newsics.com
ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಟಗದ್ದಾರೆ.
ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಸೋಮವಾರ ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಬಂಧಿತ ಆರೋಪಿಗಳು. ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ. ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.
ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕಿನಲ್ಲಿ ಈ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು.
Maturtva Suraksha abhiyan: ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ
Saif Ali Khan: ಸೈಫ್ ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನಿಗೆ ಭರ್ಜರಿ ಗಿಫ್ಟ್
ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ …muslim man converts duism
Heart attack ನೌಕರಿ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮಗ! ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ತಾಯಿ